ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಕ್ಕಪಾಠ.
ವರದಿಗಾರರು : ಮುತ್ತುರಾಜ್ | ಸ್ಥಳ : ಕೊರಟಗೆರೆ | ದಿನಾಂಕ : 22-11-2025

ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಕ್ಕಪಾಠ.

ತುಮಕೂರು : ತಂದೆ-ತಾಯಿ ಆಸ್ತಿ ದಾನ ಮಾಡಿದ ನಂತರ, ಅವರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಂದೆ ತಾಯಿ ತಕ್ಕ ಪಾಠ ಕಲಿಸಿದ್ದು, ತಾವು ದಾನವಾಗಿ ನೀಡಿದ ಆಸ್ತಿಯನ್ನು ವಾಪಾಸ್ ಪಡೆದುಕೊಳ್ಳುವ ಮೂಲಕ, ಮಕ್ಕಳಿಗೆ ಬುದ್ಧಿ ಕಳಿಸಿದ್ದಾರೆ.

ಶಿರಾ ತಾಲ್ಲೂಕಿನ ಸಪ್ತಗಿರಿ ಬಡಾವಣೆಯ ರಂಗಮ್ಮ ಅವರು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ(Senior Citizens Helpline)ವನ್ನು ಸಂಪರ್ಕಿಸಿದ್ದರು. ಈ ಮೂಲಕ ದೂರು ನೀಡಿದ ಅವರು, ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಮಠ ಗ್ರಾಮದ ಸ.ನಂ. 37ರ 3-26 ಎ/ಗುಂಟೆ ಜಮೀನನ್ನು ದಿನಾಂಕ 23-12-2021 ರಂದು ತಮ್ಮ ಮೂವರು ಪುತ್ರರಾದ ಗುಜ್ಜಾರಪ್ಪ, ಶಿವಣ್ಣ ಮತ್ತು ಹನುಮಂತಯ್ಯ ಅವರಿಗೆ ದಾನಪತ್ರದ ಮೂಲಕ ನೀಡಿದ್ದಾಗಿ ತಿಳಿಸಿದ್ದಾರೆ. ಆದರೆ ದಾನಪತ್ರ ಪಡೆದ ನಂತರ ಮಕ್ಕಳು ತಾಯಿಯ ಹಾಗೂ ತಂದೆಯ ಆರೈಕೆ, ಆಹಾರ, ಚಿಕಿತ್ಸಾ ನೆರವು, ಮೂಲಭೂತ ಅಗತ್ಯಗಳನ್ನು ನಿರ್ಲಕ್ಷಿಸಿದ್ದು, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಆದ್ದರಿಂದ ದಾನಪತ್ರವನ್ನು ರದ್ದುಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ತಂದೆ ತಾಯಿಯ ದೂರಿನ ಹಿನ್ನೆಲೆ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿದ ಮೂವರು ಪುತ್ರರು ಜಂಟಿಯಾಗಿ ಲಿಖಿತ ಹೇಳಿಕೆ ಸಲ್ಲಿಸಿದ್ದು, ತಾಯಿ–ತಂದೆಗೆ ಆರೈಕೆ ಮಾಡುತ್ತಿದ್ದೇವೆ, ದಾನಪತ್ರ ತಾಯಿಯ ಸ್ವಇಚ್ಛೆಯಿಂದ ಮಾಡಲಾಗಿದೆ, ಭೂಮಿಯಲ್ಲಿ ಅಭಿವೃದ್ಧಿ ಮಾಡಿರುವುದರಿಂದ ಹಿಂದಿರುಗಿಸಲು ಸಮ್ಮತಿ ಇಲ್ಲ, ತಾಯಿ–ತಂದೆ ತಮ್ಮ ಜತೆ ವಾಸಿಸಲು ಬಂದರೆ ನೋಡಿಕೊಳ್ಳಲು ಸಿದ್ಧ ಎಂದು ಹೇಳಿದರು.

ನಾವು ತಂದೆ ತಾಯಿಯ ಆರೈಕೆ ಮಾಡುತ್ತಿದ್ದೇವೆ ಎಂದು ಹೇಳಿರುವ ಪುತ್ರರು ಅದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತಮ್ಮ ವಾದಕ್ಕೆ ಯಾವುದೇ ಬೆಂಬಲವಾದ ಸಾಕ್ಷಿಗಳು ಅವರಿಂದ ದೊರೆಯಲಿಲ್ಲ.

ವಯೋವೃದ್ಧೆಯ ದೂರನ್ನು ವಿಚಾರಣೆ ನಡೆಸಿದ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯವು ಹಿರಿಯ ನಾಗರಿಕರಾದ ರಂಗಮ್ಮ ಅವರು ತಮ್ಮ ಮೂವರು ಪುತ್ರರಿಗೆ ನೀಡಿದ್ದ ದಾನಪತ್ರವನ್ನು ರದ್ದುಪಡಿಸುವ ಮಹತ್ವದ ಆದೇಶವನ್ನು ಹೊರಡಿಸಿದೆ. ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆ–2007ರ ಕಲಂ 23(1) ರಡಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ತಂದೆ ತಾಯಿಯಿಂದ ಆಸ್ತಿಯನ್ನು ವರ್ಗಾಯಿಸಿಕೊಂಡ ನಂತರ ಅವರಿಗೆ ಮೂರು ಹೊತ್ತು ಆಹಾರ, ಮೂಲಭೂತ ಸೌಕರ್ಯಗಳನ್ನೂ ಒದಗಿಸದೇ ನಿರ್ಲಕ್ಷಿಸುವ, ಕಿರುಕುಳ ನೀಡುವ ಮಕ್ಕಳಿಗೆ ನ್ಯಾಯಾಲಯದ ಈ ಆದೇಶ ತಕ್ಕ ಪಾಠ ಕಲಿಸಿದಂತಾಗಿದೆ.

ದಾನಪತ್ರದಲ್ಲಿ “ಮಕ್ಕಳು ನನ್ನ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವುದರಿಂದ ನಿರಂತರ ಆರೈಕೆಯ ನಂಬಿಕೆಯಿಂದ ದಾನ” ಮಾಡಲಾಗಿದೆ ಎಂದು ಸ್ಪಷ್ಟವಾದ ಷರತ್ತು ಉಲ್ಲೇಖಿತವಾಗಿದೆ. ಹಿರಿಯರು ಹೇಳಿದಂತೆ, ಮಕ್ಕಳು ಆ ಷರತ್ತನ್ನು ಪಾಲಿಸದಿರುವುದು ದೃಢಪಟ್ಟ ಕಾರಣ, ಕಲಂ 23(1)ರ ಪ್ರಕಾರ ದಾನಪತ್ರ ರದ್ದುಪಡಿಸಲು ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಉಪವಿಭಾಗಾಧಿಕಾರಿಗಳು ಹಾಗೂ ನ್ಯಾಯ ಮಂಡಳಿಯ ಅಧ್ಯಕ್ಷರಾದ ನಾಹಿದಾ ಜಮ್ ಜಮ್, ಕೆ.ಎ.ಎಸ್. ಅವರು ತಮ್ಮ ಆದೇಶದಲ್ಲಿ, ಉಪನೋಂದಣಾಧಿಕಾರಿಗಳು, ಗುಬ್ಬಿ ಕಛೇರಿಯಲ್ಲಿ ದಾಖಲಾದ ಜಿಬಿಬಿ—1–06849–2021–22, ದಿನಾಂಕ 23—12–2021ರ ದಾನಪತ್ರವನ್ನು “ನಿರರ್ಥಕ” ಎಂದು ಘೋಷಿಸಿ ರದ್ದುಪಡಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39049+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39138+