ಬೆಂಗಳೂರಿನಲ್ಲಿ ಬೆಚ್ಚಿ ಬಿಳಿಸುವ ಘಟನೆ ...ಕಸದ ರಾಶಿಯಲ್ಲಿ ಮಹಿಳೆಯ ಶವ ಪತ್ತೆ ...!
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ . ಕಸದ ರಾಶಿ ನಡುವೆ ಮಹಿಳೆಯ ಶವ ಪತ್ತೆಯಾಗಿದ್ದು, ಕೆಂಗೇರಿಯ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಾಡ್ನಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾರೆ ಎನ್ನಲಾಗ್ತಿದೆ. ಮೃತದೇಹ ಬಿದ್ದ ಜಾಗದಲ್ಲಿ ರಕ್ತದ ಕಲೆ ಇದ್ದು, ತೀವ್ರ ರಕ್ತಸಾವ್ರದಿಂದ ಒದ್ದಾಡಿ ಮಹಿಳೆ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾರಕಾಸ್ತ್ರಗಳಿಂದ ಹೊಡೆದು ಮಹಿಳೆಯನ್ನು ಕೊಲೆಗೈದ ಹಂತಕರು ಆಕೆಯನ್ನ ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಕಸದ ರಾಶಿಗೆ ಬಿಸಾಡಿ ಹೋಗಿದ್ದಾರೆ. ಕೆಂಗೇರಿಯ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 45 ವರ್ಷದ ಕೆಂಪಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕೆಂಪಮ್ಮ ಕೊಲೆಯಾದ ಜಾಗದಲ್ಲಿ ಮಹಿಳೆಯ ಆಧಾರ್ ಕಾರ್ಡ್ ಸಿಕ್ಕಿದೆ ಎನ್ನಲಾಗ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಿತ್ಯ ಅದೇ ರಸ್ತೆಯಲ್ಲಿ ಓಡಾಡ್ತಿದ್ದ ಜನರು ಮಹಿಳೆ ಶವ ಕಂಡು ಶಾಕ್ ಆಗಿದ್ದಾರೆ. ಮಹಿಳೆಯ ಕೊಲೆಗೆ ಕರಣ ತಿಳಿದುಬಂದಿಲ್ಲ . ಅಪರಾಧಿಗಳ ಹುಡುಕಾಟದಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ .