ಅರಬೆತ್ತಲೆ ಕಂಟೆಟ್ ಪ್ರೊಮೋಟ್ ! ನಿರೂಪಕಿ ವಿಷ್ಣು ಪ್ರಿಯಾ ವಿರುದ್ಧ ಸೈಬರ್ ಕ್ರೈಂಗೆ ದೂರು...
ವಿಷ್ಣು ಪ್ರಿಯಾ ಅರಬೆತ್ತಲೆ ಕಂಟೆಟ್ ಪ್ರೊಮೋಟ್ ಮಾಡಿರುವ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲೇ ಅವರ ವಿರುದ್ಧ ದೂರು ದಾಖಲಾಗಿದೆ. ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅರೆಬೆತ್ತಲೆ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವಂತಹ ಕಂಟೆಂಟ್ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.ತೆಲುಗು ಚಿತ್ರರಂಗದ ನಿರೂಪಕಿ ವಿಷ್ಣು ಪ್ರಿಯಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅರೆಬೆತ್ತಲೆ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವಂತಹ ಕಂಟೆಂಟ್ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಜನಪ್ರಿಯ ತೆಲುಗು ನಿರೂಪಕಿ ವಿಷ್ಣು ಪ್ರಿಯಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅರೆಬೆತ್ತಲೆ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವಂತಹ ಕಂಟೆಂಟ್ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆವಿಷ್ಣು ಪ್ರಿಯಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಆಗಾಗ ಗ್ಲಾಮರಸ್ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಪೋಸ್ಟ್ ಮಾಡುತ್ತಿರುವ ಕೆಲವು ಫೋಟೋಗಳು ಎಲ್ಲೆ ಮೀರುತ್ತಿವೆ, ಸಾಮಾಜಿಕ ಸಭ್ಯತೆಗೆ ವಿರುದ್ಧವಾಗಿವೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಅದರಲ್ಲೂ ಜಾಹೀರಾತುಗಳಿಗಾಗಿ ಅವರು ಬಳಸುವ ಫೋಟೋ, ವಿಡಿಯೋಗಳು ಯುವ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಬಗ್ಗೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ವಿಷ್ಣು ಪ್ರಿಯಾ ತಮ್ಮ ಜನಪ್ರಿಯತೆ ಬಳಸಿಕೊಂಡು 'ಅರೆಬೆತ್ತಲೆ' ಶೈಲಿಯ ಜಾಹೀರಾತುಗಳನ್ನು ಮಾಡುವ ಮೂಲಕ ಸೋಷಿಯಲ್ ಮೀಡಿಯಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದು ಸಾರ್ವಜನಿಕ ಸಭ್ಯತೆಗೆ ಧಕ್ಕೆ ತರುತ್ತಿದೆ ಎಂದು ದೂರುದಾರರು ವಾದಿಸಿದ್ದಾರೆ. ಡಿಜಿಟಲ್ ವೇದಿಕೆಗಳಲ್ಲಿ ಇಂತಹ ಕಂಟೆಂಟ್ಗಳು ಎಲ್ಲರನ್ನೂ ಸುಲಭವಾಗಿ ತಲುಪುವುದರಿಂದ, ಇದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಸುದ್ದಿ ತೆಲುಗು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.