ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ
ಚಿಕ್ಕಮಗಳೂರು : 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಅಪ್ರಾಪ್ತ ಬಾಲಕಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ. ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿ ಶ್ರೀನಂದಾ ನಾಪತ್ತೆಯಾಗಿ ಮೂರು ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾಳೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುಮಾರು 2000 ಅಡಿ ಆಳದ ಕಣಿವೆಯಲ್ಲಿ ಮೃತದೇಹ ಕಂಡುಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುಮಾರು 2000 ಅಡಿ ಆಳದ ಕಣಿವೆಯಲ್ಲಿ ಶ್ರೀನಂದಾ ಮೃತದೇಹ ಕಂಡುಬಂದಿದೆ. ಡ್ರೋನ್ ಕ್ಯಾಮೆರಾದಲ್ಲಿ ಶವ ಕಾಣಿಸಿಕೊಂಡ ನಂತರ ರಕ್ಷಣಾ ತಂಡಗಳು ಪತ್ತೆಹಚ್ಚಿದ್ದಾರೆ. ಶ್ರೀನಂದಾ (14) ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ತನ್ನ ಕುಟುಂಬದೊಂದಿಗೆ ಚಂದ್ರದ್ರೋಣ ಪರ್ವತ ಪ್ರದೇಶಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮಾಣಿಕ್ಯಧಾರಾ, ದೇವೀರಮ್ಮ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ನಾಪತ್ತೆಯಾಗಿದ್ದಳು. ನಾಪತ್ತೆಯಾಗಿ ಮೂರನೇ ದಿನವಾದ ಇಂದು ಬೆಳಗ್ಗೆ ಡ್ರೋನ್ ಕ್ಯಾಮೆರಾದಲ್ಲಿ ಶ್ರೀನಂದಾ ಶವ ಕಾಣಿಸಿಕೊಂಡಿದೆ. ಫೋಟೋ ಕಂಡು ಫೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಇತರೆ ಸುದ್ದಿಗಳು