ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮೈದುಂಬಿದ ಕಣಕಟ್ಟೆ ಹೋಬಳಿ ಕೆರೆಗಳಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಂದ ಬಾಗಿನ ಅರ್ಪಣೆ
ವರದಿಗಾರರು : ಕೆ ಜಿ ಸುರೇಶ್ | ಸ್ಥಳ : ಹಾಸನ | ದಿನಾಂಕ : 21-11-2025

ಮೈದುಂಬಿದ ಕಣಕಟ್ಟೆ ಹೋಬಳಿ ಕೆರೆಗಳಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಂದ ಬಾಗಿನ ಅರ್ಪಣೆ

ವನವಳ್ಳಿ ಏತ ನೀರಾವರಿ ಯೋಜನೆ ಫಲವಾರಿಯಾಗಿ; “ಜನಸೇವೆಯೇ ನನ್ನ ಹಂಬಲ” – ಶಾಸಕ ಅರಸೀಕೆರೆ: ಬಯಲುಸೀಮೆ ರೈತರ ಬದುಕು ನೀರು ಮತ್ತು ವಿದ್ಯುತ್ ಪೂರೈಕೆಯಿಂದಲೇ ಬದಲಾಗುತ್ತದೆ ಎಂದು ತಿಳಿಸಿದ್ದಾರೆ ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರೂ ಆದ ಸ್ಥಳೀಯ ಶಾಸಕ ಕೆ.ಎಂ. ಶಿವಲಿಂಗೇಗೌಡ. ವನವಳ್ಳಿ ಏತ ನೀರಾವರಿ ಯೋಜನೆಯ ಫಲವಾಗಿ ಮೈದುಂಬಿಕೊಂಡಿರುವ ಕಣಕಟ್ಟೆ ಹೋಬಳಿಯ ಕೆರೆಗಳಿಗೆ ಶುಕ್ರವಾರ ಅವರು ಬಾಗಿನ ಅರ್ಪಿಸಿದರು. ಹೊಳಲ್ಕೆರೆ, ಹರಳಕಟ್ಟ, ಡಿ.ಎಂ.ಕುರ್ಕೆ, ಚಿಕ್ಕೊಂಡಿಹಳ್ಳಿ, ಮಾಡಾಳು, ಸಾತನಗೆರೆ ಹಾಗೂ ಕಣಕಟ್ಟೆ ಸೇರಿದಂತೆ ಅನೇಕ ಕೆರೆಗಳು ಈಗ ಹೇಮಾವತಿ ನೀರಿನಿಂದ ತುಂಬಿ ಹರಿಯುತ್ತಿವೆ. ಇದನ್ನು ಕಂಡು ತೃಪ್ತಿಯಿಂದ ಮಾತನಾಡಿದ ಶಾಸಕರು, “ಹೇಮಾವತಿ ಮೂಲದಿಂದ ಪ್ರತ್ಯೇಕ ಕೊಳವೆ ಕಲ್ಪಿಸಬೇಕೆಂಬ ಹೋರಾಟವನ್ನು ನಾನು ಸದನದ ಒಳಗೂ ಹೊರಗೂ ನಡೆಸಿದ ಪರಿಣಾಮ, ಇಂದು ಈ ಭಾಗಕ್ಕೆ ಸಮೃದ್ಧ ನೀರು ತಲುಪುತ್ತಿದೆ,” ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಎಂ.ಎಸ್.ವಿ. ಸ್ವಾಮಿ ಮಾತನಾಡಿ, “ವನವಳ್ಳಿ ಏತ ನೀರಾವರಿ ಸಾಕಾರಗೊಳ್ಳಲು ಶಾಸಕರ ಹೋರಾಟವೇ ಮುಖ್ಯ ಕಾರಣ. ಈ ಯೋಜನೆ ಕಣकಟ್ಟೆ ಹೋಬಳಿಗೆ ನಿಜವಾದ ವರದಾನದಂತಾಗಿದೆ,” ಎಂದರು. ಈ ಯೋಜನೆಯಿಂದ ಅಂತರ್ಜಲ ಹೆಚ್ಚಳವಾಗಲಿದ್ದು, ಕೊಳವೆ ಬಾವಿಗಳ ಮೇಲೆ ಅವಲಂಬಿತವಾಗಿರುವ ರೈತರಿಗೂ ದೊಡ್ಡ ನೆರವಾಗಲಿದೆ. ಸಂಗ್ರಹಿತ ನೀರಿನ ಸದುಪಯೋಗಕ್ಕಾಗಿ ಹೆಚ್ಚುವರಿ ಕೃಷಿ ಪಂಪ್‌ಸೆಟ್ ವ್ಯವಸ್ಥೆ ಮಾಡಲು ಶಾಸಕರು ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಹೇಮಾವತಿ ಜಲಾಶಯ ಯೋಜನೆಯ ಎಇಇ ನಾಗಭೂಷಣ, ರಾಂಪುರ ಗ್ರಾ.ಪಂ. ಅಧ್ಯಕ್ಷ ಸುರೇಶ್, ಡಿ.ಎಂ. ಕುರ್ಕೆ ಸೊಸೈಟಿ ಅಧ್ಯಕ್ಷ ಸುರೇಶ್, ಚನ್ನಬಸಪ್ಪ, ಮಾಜಿ ತಾ.ಪಂ. ಅಧ್ಯಕ್ಷ ನಂಜುಂಡಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಶಾಸಕರ ಮನದಾಳದ ಮಾತು “ನನಗೆ ಅಧಿಕಾರದ ಲಾಲಸೆ ಇಲ್ಲ. ಅವಕಾಶ ಸಿಕ್ಕರೆ ಜನಸೇವೆ ಮಾಡಲು ಸದಾ ಸಿದ್ದ. ಜನರ ಆಶೀರ್ವಾದ ಇದ್ದರೆ ಮಂತ್ರಿ ಸ್ಥಾನ ಕೂಡ ನನಗೆ ಒಲಿಯಬಹುದು. ಅವಕಾಶ ದೊರೆತರೆ ಅರಸೀಕೆರೆಯನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿ ದೃಢಪ್ರಯತ್ನ ಮಾಡುತ್ತೇನೆ,” ಎಂದು ಶಾಸಕರು ಹೃದಯದ ಮಾತು ಹಂಚಿಕೊಂಡರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+