ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮಹಿಳಾ ಸಬಲೀಕರಣಕ್ಕಾಗಿ ಹುಣಸೂರಿನಲ್ಲಿ ಜಾಗೃತಿ ಕಾರ್ಯಕ್ರಮ
ವರದಿಗಾರರು : ರಾಮಕೃಷ್ಣೇಗೌಡ | ಸ್ಥಳ : ಹುಣಸೂರು | ದಿನಾಂಕ : 27-11-2025

ಮಹಿಳಾ ಸಬಲೀಕರಣಕ್ಕಾಗಿ ಹುಣಸೂರಿನಲ್ಲಿ ಜಾಗೃತಿ ಕಾರ್ಯಕ್ರಮ

ಹುಣಸೂರು ಪಟ್ಟಣದ ಸ್ಟೋರ್ ಬೀದಿಯಲ್ಲಿ ಮಹಿಳೆಯರಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಾಧಿಕಾರಿಯವರ ಕಚೇರಿ ಹಾಗೂ ಉಚಿತ ಕಾನೂನು ಸೇವಾ ಸಮಿತಿ ಹುಣಸೂರು ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದೌರ್ಜನ್ಯ ನಿಷೇಧ ಕಾಯಿದೆ ಮತ್ತು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕುರಿತು ಅರಿವು ಕಾರ್ಯಕ್ರಮವನ್ನು ಗುರುವಾರ ಏರ್ಪಡಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗೌರವಾನ್ವಿತ ತಾಲ್ಲೂಕು ಪ್ರಧಾನ ನ್ಯಾಯಾಧೀಶೆ ಶ್ರೀಮತಿ ಆಯಿಷಾ ಬಿ. ವಜೀದ್ ಅವರು, “ಇಂದಿನ ಸಮಾಜವು ಬಾಲ್ಯ ವಿವಾಹದಂತಹ ಹಿನ್ನಡೆಯಿಂದ ಹೊರಬಂದು ನಾಗರೀಕತೆ ಹಾಗೂ ಪ್ರಜ್ಞೆಯತ್ತ ಹೆಜ್ಜೆ ಹಾಕುತ್ತಿದೆ. ಮಹಿಳಾ ಸಬಲೀಕರಣ, ಸಮಾನತೆ, ಆರ್ಥಿಕ ಸ್ವಾವಲಂಬನೆ ಮತ್ತು ಕಾನೂನು ಅರಿವು ಹೆಚ್ಚುತ್ತಿರುವುದು ಸಂತೋಷಕರ. ಇನ್ನೂ ಹೆಚ್ಚಿನ ಪ್ರಗತಿಯಿಗಾಗಿ ಭಾರತೀಯ ಸಂವಿಧಾನವೇ ನಮ್ಮಿಗೆ ಆಶ್ರಯ ಮತ್ತು ಮಾರ್ಗದರ್ಶಕ ವೇದಿಕೆ,” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸರಕಾರಿ ಸಹಾಯಕ ಅಭಿಯೋಜಕಿ ಶ್ರೀಮತಿ ಪಾರ್ವತಿ, ಪ್ಯಾನಲ್ ವಕೀಲರಾದ ಕುಮಾರಿ ಶ್ವೇತಾ, ಹುಣಸೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಶಿವಣ್ಣೇ ಗೌಡ, ಎ.ಸಿ.ಡಿ.ಪಿ.ಒ ಕೆ. ಸೋಮಯ್ಯ, ಹಾಗೂ ವೃತ್ತ ಮೇಲ್ವಿಚಾರಕಿ ಕುಮಾರಿ ಜಯಶ್ರೀ ಅಂಗಡಿ ಗಣ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಅತಿಥಿಗಳು ಮಹಿಳೆಯರ ಕಾನೂನು ಹಕ್ಕುಗಳು, ದೌರ್ಜನ್ಯ ನಿಷೇಧ ಕಾಯಿದೆ, ಹಾಗೂ ಸಾಮಾಜಿಕ ಜಾಗೃತಿಯ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ಎ.ಸಿ.ಡಿ.ಪಿ.ಒ ಕೆ. ಸೋಮಯ್ಯ ಅವರು ಇಲಾಖೆಯಲ್ಲಿ ಜಾರಿಯಲ್ಲಿರುವ ವಿವಿಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮವನ್ನು ಕుమಾರಿ ಜಯಶ್ರೀ ಅಂಗಡಿ ಅವರು ನಿರೂಪಿಸಿದರು. ಪ್ರಾರ್ಥನಾ ಗೀತೆಯನ್ನು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಕ್ಷ್ಮಮ್ಮ ಅವರು ಹಾಡಿದರು. ಹುಣಸೂರು ತಾಲ್ಲೂಕಿನ ಅನೇಕ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+