ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 19-01-2026

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

ದೊಡ್ಡ ನಗರಗಳಲ್ಲಿ ಒತ್ತಡದಿಂದ ನಾವು ಯಂತ್ರಗಳಂತೆ ಕೆಲಸ ಮಾಡುತ್ತಿದ್ದೇವೆ. ವಾಯು ಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು ಹಳ್ಳಿಗಳಿಗೆ ಓಡಿ ಹೋಗುವ ಕಾಲ ಬರುತ್ತದೆ ಎಂದು ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಎಚ್ಚರಿಸಿದರು.

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಲಾಲ್‌ಬಾಗ್‌ನಲ್ಲಿ ಶನಿವಾರ ಆಯೋಜಿಸಿದ್ದ ಎರಡನೇ ರಾಷ್ಟ್ರೀಯ ಮರಗೆತ್ತನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೊಡ್ಡ ನಗರಗಳಲ್ಲಿ 'ಅಂತರ್ಜಲ' ಕುಸಿಯುತ್ತಿದ್ದು 'ಅಂತರ್ಜಾಲ' ಹೆಚ್ಚಾಗುತ್ತಿದೆ. ವಾಯುಮಾಲಿನ್ಯದಿಂದಾಗಿ ಉಸಿರಾಟದ ಸಮಸ್ಯೆ, ಅಸ್ತಮಾ, ಕೆಮ್ಮು ಜಾಸ್ತಿಯಾಗುತ್ತದೆ ಎಂದು ಜನಸಾಮಾನ್ಯರು ತಿಳಿದಿದ್ದಾರೆ. ಆದರೆ ವಾಯು ಮಾಲಿನ್ಯ ಕೃತಕ ಧೂಮಪಾನವಾಗಿದ್ದು ಹೃದಯಾಘಾತ ಆಗಬಹುದು. ಗರ್ಭಪಾತ, ಜನಿಸುವ ಮಗುವಿನ ತೂಕ ಕಡಿಮೆ ಇರುವುದು ಮತ್ತಿತರ ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

ಧೂಮಪಾನಕ್ಕಿಂತ ಅಧಿಕ ಸಾವು:

ವರದಿಯೊಂದರ ಪ್ರಕಾರ ಕಳೆದ ವರ್ಷ ದೇಶದಲ್ಲಿ ವಾಯ ಮಾಲಿನ್ಯದಿಂದಾಗಿ 22 ಲಕ್ಷ ಜನ ಮೃತಪಟ್ಟಿದ್ದಾರೆ. ಆದರೆ ಧೂಮಪಾನದಿಂದಾಗಿ ಮೃತಪಟ್ಟವರ ಸಂಖ್ಯೆ 14 ಲಕ್ಷ ಮಾತ್ರ. ವಾಹನಗಳ ದಟ್ಟಣೆ, ಕಟ್ಟಡಗಳ ಧೂಳು, ಬೆಂಕಿ ಹಚ್ಚುವುದು, ಕೈಗಾರಿಕೆಗಳಿಂದ ಹೊರಸೂಸುವ ಅನಿಲಗಳಿಂದಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ ಎದುರುಗಡೆ ಇರುವ ಮನುಷ್ಯರೇ ಕಾಣಿಸುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ನಮಗೆ ಇಂದು ಶುದ್ಧ ಗಾಳಿ ಬೇಕಿದೆ.

ನಗರಕ್ಕೆ ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌ ಮಾದರಿಯಲ್ಲಿ ಇನ್ನೂ ಮೂರ್ನಾಲ್ಕು ಉದ್ಯಾನವನಗಳ ಅವಶ್ಯಕತೆ ಇದೆ. ಇಲ್ಲಿ ಮರಗಳಿಂದ ಕಲಾಕೃತಿ ರಚಿಸಿರುವ ಈ ಕಲಾವಿದರೇ ನಿಜವಾದ ಪರಿಸರದ ಹಿರೋಗಳಾಗಿದ್ದಾರೆ. ನಮ್ಮ ಬದುಕಿಗೆ ನಿಜವಾದ ಫೇಸ್‌ ಮೇಕರ್‌ ಪರಿಸರವಾಗಿದ್ದು ಇದನ್ನು ನಾವು ಉಳಿಸಿ ಬೆಳೆಸಬೇಕು ಎಂದು ಕರೆ ನೀಡಿದರು. ಮರದಿಂದ ಕೆತ್ತಿದ ಹುಲಿ, ಜೇನುಹುಳ ಮತ್ತಿತರ ಕಲಾ ಕೃತಿಗಳು ಗಮನ ಸೆಳೆದವು. ಇದೇ ಸಂದರ್ಭದಲ್ಲಿ ಮರಗೆತ್ತನೆಯಲ್ಲಿ ಪಾಲ್ಗೊಂಡ ಕಲಾವಿದರನ್ನು ಗೌರವಿಸಲಾಯಿತು. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ್‌, ಪರಿಸರ ತಜ್ಞ ಡಾ.ಎ.ಎನ್‌.ಯಲ್ಲಪರೆಡ್ಡಿ, ತೋಟಗಾರಿಕಾ ಇಲಾಖೆ ಅಪರ ನಿರ್ದೇಶಕ ಡಾ.ಎಂ.ಜಗದೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+