ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 19-01-2026

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

ದೊಡ್ಡ ನಗರಗಳಲ್ಲಿ ಒತ್ತಡದಿಂದ ನಾವು ಯಂತ್ರಗಳಂತೆ ಕೆಲಸ ಮಾಡುತ್ತಿದ್ದೇವೆ. ವಾಯು ಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು ಹಳ್ಳಿಗಳಿಗೆ ಓಡಿ ಹೋಗುವ ಕಾಲ ಬರುತ್ತದೆ ಎಂದು ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಎಚ್ಚರಿಸಿದರು.

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಲಾಲ್‌ಬಾಗ್‌ನಲ್ಲಿ ಶನಿವಾರ ಆಯೋಜಿಸಿದ್ದ ಎರಡನೇ ರಾಷ್ಟ್ರೀಯ ಮರಗೆತ್ತನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೊಡ್ಡ ನಗರಗಳಲ್ಲಿ 'ಅಂತರ್ಜಲ' ಕುಸಿಯುತ್ತಿದ್ದು 'ಅಂತರ್ಜಾಲ' ಹೆಚ್ಚಾಗುತ್ತಿದೆ. ವಾಯುಮಾಲಿನ್ಯದಿಂದಾಗಿ ಉಸಿರಾಟದ ಸಮಸ್ಯೆ, ಅಸ್ತಮಾ, ಕೆಮ್ಮು ಜಾಸ್ತಿಯಾಗುತ್ತದೆ ಎಂದು ಜನಸಾಮಾನ್ಯರು ತಿಳಿದಿದ್ದಾರೆ. ಆದರೆ ವಾಯು ಮಾಲಿನ್ಯ ಕೃತಕ ಧೂಮಪಾನವಾಗಿದ್ದು ಹೃದಯಾಘಾತ ಆಗಬಹುದು. ಗರ್ಭಪಾತ, ಜನಿಸುವ ಮಗುವಿನ ತೂಕ ಕಡಿಮೆ ಇರುವುದು ಮತ್ತಿತರ ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

ಧೂಮಪಾನಕ್ಕಿಂತ ಅಧಿಕ ಸಾವು:

ವರದಿಯೊಂದರ ಪ್ರಕಾರ ಕಳೆದ ವರ್ಷ ದೇಶದಲ್ಲಿ ವಾಯ ಮಾಲಿನ್ಯದಿಂದಾಗಿ 22 ಲಕ್ಷ ಜನ ಮೃತಪಟ್ಟಿದ್ದಾರೆ. ಆದರೆ ಧೂಮಪಾನದಿಂದಾಗಿ ಮೃತಪಟ್ಟವರ ಸಂಖ್ಯೆ 14 ಲಕ್ಷ ಮಾತ್ರ. ವಾಹನಗಳ ದಟ್ಟಣೆ, ಕಟ್ಟಡಗಳ ಧೂಳು, ಬೆಂಕಿ ಹಚ್ಚುವುದು, ಕೈಗಾರಿಕೆಗಳಿಂದ ಹೊರಸೂಸುವ ಅನಿಲಗಳಿಂದಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ ಎದುರುಗಡೆ ಇರುವ ಮನುಷ್ಯರೇ ಕಾಣಿಸುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ನಮಗೆ ಇಂದು ಶುದ್ಧ ಗಾಳಿ ಬೇಕಿದೆ.

ನಗರಕ್ಕೆ ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌ ಮಾದರಿಯಲ್ಲಿ ಇನ್ನೂ ಮೂರ್ನಾಲ್ಕು ಉದ್ಯಾನವನಗಳ ಅವಶ್ಯಕತೆ ಇದೆ. ಇಲ್ಲಿ ಮರಗಳಿಂದ ಕಲಾಕೃತಿ ರಚಿಸಿರುವ ಈ ಕಲಾವಿದರೇ ನಿಜವಾದ ಪರಿಸರದ ಹಿರೋಗಳಾಗಿದ್ದಾರೆ. ನಮ್ಮ ಬದುಕಿಗೆ ನಿಜವಾದ ಫೇಸ್‌ ಮೇಕರ್‌ ಪರಿಸರವಾಗಿದ್ದು ಇದನ್ನು ನಾವು ಉಳಿಸಿ ಬೆಳೆಸಬೇಕು ಎಂದು ಕರೆ ನೀಡಿದರು. ಮರದಿಂದ ಕೆತ್ತಿದ ಹುಲಿ, ಜೇನುಹುಳ ಮತ್ತಿತರ ಕಲಾ ಕೃತಿಗಳು ಗಮನ ಸೆಳೆದವು. ಇದೇ ಸಂದರ್ಭದಲ್ಲಿ ಮರಗೆತ್ತನೆಯಲ್ಲಿ ಪಾಲ್ಗೊಂಡ ಕಲಾವಿದರನ್ನು ಗೌರವಿಸಲಾಯಿತು. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ್‌, ಪರಿಸರ ತಜ್ಞ ಡಾ.ಎ.ಎನ್‌.ಯಲ್ಲಪರೆಡ್ಡಿ, ತೋಟಗಾರಿಕಾ ಇಲಾಖೆ ಅಪರ ನಿರ್ದೇಶಕ ಡಾ.ಎಂ.ಜಗದೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+