ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು  ಸೃಷ್ಟಿಸಿದ ನಟ ಕಿಚ್ಚ ಸುದೀಪ್ “
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 19-01-2026

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

ಬಿಗ್ಬಾಸ್ 12 (Bigg Boss Kannada 12) ಮುಗಿದಿದೆ. ಈ ಸೀಸನ್ ಇದಾಗಲೇ ಕೆಲವು ದಾಖಲೆಗಳನ್ನು ಸೃಷ್ಟಿಸಿದೆ. ಹಿಂದೆಂದಿಗಿಂತಲೂ ಹೆಚ್ಚು ಪ್ರಮಾಣದ ವೋಟಿಂಗ್ ಪಡೆದಿರುವ ಸೀಸನ್ ಇದು ಎನ್ನಿಸಿದೆ. ವಿನ್ನರ್ಗೆ 40 ಕೋಟಿಗೂ ಅಧಿಕ ವೋಟಿಂಗ್ ಬರುವ ಮೂಲಕ, ಹೊಸದೊಂದು ದಾಖಲೆಯೇ ಸೃಷ್ಟಿಯಾಗಿದೆ.

ಅದನ್ನು ಹೊರತುಪಡಿಸಿದರೆ, ಈ ಬಾರಿ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರಿಗೆ ಇದ್ದ ಕ್ರೇಜ್ ನೋಡಿದ್ದರೆ, ಬಿಗ್ಬಾಸ್ ಸಾರ್ವತ್ರಿಕ ಚುನಾವಣೆಯನ್ನು ಮೀರಿಸುವ ಹಂತಕ್ಕೆ ಹೋಗಿರುವುದನ್ನು ನೋಡಬಹುದು. ಸ್ಪರ್ಧಿಗಳ ಪರವಾಗಿ ಖುದ್ದು ರಾಜಕಾರಣಿಗಳೇ ಅಖಾಡಕ್ಕೆ ಇಳಿದಿದ್ದರು ಎಂದರೆ ಬಿಗ್ಬಾಸ್ ಯಾವ ಪರಿಯಲ್ಲಿ ಜನರನ್ನು ಮೋಡಿ ಮಾಡಿದೆ ಎನ್ನುವುದು ಕೂಡ ಸ್ಪಷ್ಟವಾಗುತ್ತದೆ.

ದಾಖಲೆ ಬರೆದ ಕಿಚ್ಚ

ಇದು ಬಿಗ್ಬಾಸ್ ದಾಖಲೆಯಾದರೆ, ಈ ಷೋ ನಡೆಸಿಕೊಡ್ತಿರೋ ಕಿಚ್ಚ ಸುದೀಪ್ (Kichcha Sudeep) ಅವರು, 12ನೇ ಸೀಸನ್ ಮುಕ್ತಾಯದ ಬಳಿಕ ದಾಖಲೆ ಸೃಷ್ಟಿಸಿದ್ದಾರೆ. 2013ರಲ್ಲಿ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದ ಮೊದಲ ಸೀಸನ್ ನಿಂದಲೇ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಫ್ರಾಂಚೈಸಿಯಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಂತಹ ಭಾರತದ ಬಿಗ್ ಬಾಸ್‌ನ ಇತರ ಭಾಷಾ ಆವೃತ್ತಿಗಳಿಗಿಂತ ಭಿನ್ನವಾಗಿ, ಸುದೀಪ್ ಅವರೇ ಸುದೀರ್ಘ ಅವಧಿಯವರೆಗೆ ಈ ಷೋ ನಡೆಸಿಕೊಟ್ಟಿದ್ದಾರೆ. ಬಿಗ್ ಬಾಸ್ ಕನ್ನಡವು ತನ್ನ ಪ್ರತಿಯೊಂದು ಸೀಸನ್‌ನಲ್ಲೂ ಕಾರ್ಯಕ್ರಮವನ್ನು ಮುನ್ನಡೆಸಲು ಸುದೀಪ್ ಅವರನ್ನು ಮಾತ್ರ ಅವಲಂಬಿಸಿದೆ. ಈ ನಿರಂತರ ಸಹಯೋಗವು ಅವರನ್ನು ಸತತ ಒಂಬತ್ತು ಸೀಸನ್‌ಗಳಿಗೆ ಒಂದೇ ಪ್ರಾದೇಶಿಕ ಆವೃತ್ತಿಯನ್ನು ಮುನ್ನಡೆಸುವ ಏಕೈಕ ಭಾರತೀಯ ಬಿಗ್ ಬಾಸ್ ನಿರೂಪಕರ ಎಂದು ಗುರುತಿಸಿದೆ. ಈ ಮೂಲಕ ಅವರು ದಾಖಲೆ ಸೃಷ್ಟಿಸಿದ್ದಾರೆ.

ಶಾಕ್ ಕೊಟ್ಟಿದ್ದ ಸುದೀಪ್

ಅಷ್ಟಕ್ಕೂ ಸುದೀಪ್ ಅವರು ಕಳೆದ ಸೀಸನ್ ಬಳಿಕ ತಾವು ಮುಂದಿನ ಸೀಸನ್ನಿಂದ ಬಿಗ್ಬಾಸ್ ನಡೆಸುವುದಿಲ್ಲ ಎಂದು ಹೇಳುವ ಮೂಲಕ ಶಾಕ್ ಕೊಟ್ಟಿದ್ದರು. ಇದಕ್ಕೆ ತಮ್ಮದೇ ಆದ ಕಾರಣಗಳನ್ನೂ ನೀಡಿದ್ದರು. ಇದರಿಂದ ಅವರ ಅಭಿಮಾನಿಗಳು ಯಾವ ಪರಿಯಲ್ಲಿ ಶಾಕ್ ಆಗಿದ್ದರು ಎಂದರೆ, ಇದು ಸಾಧ್ಯನೇ ಇಲ್ಲ. ನಿಮ್ಮ ಸ್ಥಾನದಲ್ಲಿ ಬೇರೆ ಯಾರನ್ನೂ ನೋಡಲು ಸಾಧ್ಯವಿಲ್ಲ, ನೀವೇ ಬೇಕು ಎಂದರೂ ಸುದೀಪ್ ಮಾತ್ರ ಅದು ಸಾಧ್ಯವೇ ಇಲ್ಲ ಎಂದಿದ್ದರು.

ಫ್ಯಾನ್ಸ್ ಖುಷ್ ಅದಾದ ಬಳಿಕ ದಿಢೀರ್ ಎಂದು ತಾವೇ ಈ ಕಾರ್ಯಕ್ರಮ ನಡೆಸುವುದಾಗಿ ಘೋಷಿಸಿದ್ದೂ ಅಲ್ಲದೇ, ಮುಂದಿನ ನಾಲ್ಕು ಸೀಸನ್ಗೆ ತಾವೇ ನಿರೂಪಕರು ಎಂದು ಹೇಳಿದರು. ಈ ಮೂಲಕ ಅಭಿಮಾನಿಗಳನ್ನು ಫುಲ್ ಖುಷ್ ಮಾಡಿದ್ದರು. ಇದೀಗ ದಾಖಲೆ ಸೃಷ್ಟಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+