ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಆಮೆಗತಿಯಲ್ಲಿ ಸಾಗುತ್ತಿರುವ ರಾಮನಗರ ರೈಲು ನಿಲ್ದಾಣದ ಕಾಮಗಾರಿ ...
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 07-04-2026

ಆಮೆಗತಿಯಲ್ಲಿ ಸಾಗುತ್ತಿರುವ ರಾಮನಗರ ರೈಲು ನಿಲ್ದಾಣದ ಕಾಮಗಾರಿ ...

ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ನಿಲ್ದಾಣದ ಸುತ್ತಮುತ್ತ ತೋಡು-ತುಂಬುಗಳೇ ಕಾಣಿಸುತ್ತಿವೆ. ಇನ್ನೊಂದೆಡೆ ಇದರಿಂದಾಗಿ ಪ್ರಯಾಣಿಕರು ದಿನನಿತ್ಯ ಧೂಳಿನ ನಡುವೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ಲಾಟ್‌ಫಾಮ್‌ರ್‍ಗಳಲ್ಲಿ ನಡೆಯುವ ಪ್ರಯಾಣಿಕರು ಧೂಳಿನ ನಡುವೆಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೈಲು ನಿಲ್ದಾಣದ ಪ್ರವೇಶ ದ್ವಾರ ಮತ್ತು ಪಾರ್ಕಿಂಗ್‌ಗಳಲ್ಲಿ ಮಾಸ್ಕ್‌ ಇಲ್ಲದೆ ನಿಲ್ಲುವುದೇ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಸಿಲ್ಕ್ ಸಿಟಿ ಎಂದೇ ಖ್ಯಾತಿಯಾಗಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಕೇಂದ್ರ ರಾಮನಗರ ರೈಲು ನಿಲ್ದಾಣಕ್ಕೆ ಪ್ರಧಾನ ಮಂತ್ರಿ ಅಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಡಿಯಲ್ಲಿ ಹೈಟೆಕ್‌ ಸ್ಪರ್ಶ ನೀಡಲಾಗುತ್ತಿದೆ. ಇದು ಜಿಲ್ಲೆಯ ಜನರ ಖುಷಿಗೆ ಕಾರಣವಾಗಿದೆ. ಆದರೆ ಆಧುನೀಕರಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.ಪ್ರಧಾನ ಮಂತ್ರಿ ಅಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಲ್ಲಿ ದೇಶದಾದ್ಯಂತ ಬರೋಬ್ಬರಿ 554 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರಕಾರ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ ರಾಜ್ಯದ 54 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಈ ಪೈಕಿ ರಾಮನಗರ ಮತ್ತು ಚನ್ನಪಟ್ಟಣ ರೈಲು ನಿಲ್ದಾಣಗಳ ಅಭಿವೃದ್ಧಿಗೂ ಚಾಲನೆ ದೊರೆತಿತ್ತು. ಆದರೆ ರಾಮನಗರ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಆರಂಭವಾಗಿ ಎರಡು ವರ್ಷಗಳೇ ಕಳೆದರೂ ಇಂದಿಗೂ ಪೂರ್ಣಗೊಂಡಿಲ್ಲ. ಹೀಗಾಗಿ ರೈಲು ನಿಲ್ದಾಣ ಅವ್ಯವಸ್ಥೆಯ ಆಗರವಾಗಿ ಬದಲಾಗಿದ್ದು, ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ.ಆಧುನೀಕರಣಗೊಳ್ಳುತ್ತಿರುವ ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ಕಟ್ಟಡದ ಜತೆಗೆ ಪ್ರಯಾಣಿಕರಿಗೆ ಬೇಕಾದ ಎಸ್ಕ್‌ಲೇಟರ್‌ ವ್ಯವಸ್ಥೆ, ದಿವ್ಯಾಂಗರಿಗೆ ಬೇಕಾದ ಅನುಕೂಲತೆ, ಪಾರ್ಕಿಂಗ್‌ ವ್ಯವಸ್ಥೆ, ಉತ್ತಮ ಪ್ರವೇಶ ದ್ವಾರ ಹಾಗೂ ವೇಟಿಂಗ್‌ ಹಾಲ್‌ ನಂತಹ ಸೌಲಭ್ಯಗಳು ಇರಲಿವೆ. ಇಲಾಖೆಯ ಅಧಿಕಾರಿಗಳು ಕಳೆದ ಆರು ತಿಂಗಳ ಹಿಂದಿನಿಂದಲೂ ಶೇ.90ರಷ್ಟು ಕಾಮಗಾರಿ ಮುಗಿದಿದ್ದು, ಶೀಘ್ರದಲ್ಲಿಯೇ ನೂತನ ರೈಲ್ವೆ ನಿಲ್ದಾಣದ ಉದ್ಘಾಟನೆಯಾಗಲಿದೆ ಎನ್ನುತ್ತಿದ್ದಾರೆ. ಆದರೆ ಕೆಲಸಗಳು ನಿಧಾನಗತಿಯಲ್ಲಿಸಾಗುತ್ತಿರುವುದರಿಂದ, ನಿರೀಕ್ಷಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳದೇ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1072+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4120+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4161+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4218+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4320+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4368+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4400+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4444+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4492+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4505+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4579+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4639+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6859+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6922+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6973+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7029+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7190+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7218+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7348+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7529+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9731+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9896+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9957+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10129+