ಶಿವಮೊಗ್ಗದ ವಿಮಾನ ನಿಲ್ದಾಣದದಲ್ಲಿ ಆತಂಕ ಮೂಡಿಸಿದ್ದ ಕರಡಿ ಸೆರೆ ...
ಶಿವಮೊಗ್ಗದ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ್ದಾರೆ .ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ಸೋಮವಾರ ನಡೆದಿದೆ.ಪೊದೆಯಿಂದ ಏರ್ಪೋರ್ಟ್ ಕಾಂಪೌಂಡ್ ಹಾರಿದ ಕರಡಿ ವಿಮಾನ ನಿಲ್ದಾಣದ ಸುತ್ತಮುತ್ತ ಗ್ರಾಮಗಳಲ್ಲಿ ಕರಡಿ ಕೆಲ ದಿನಗಳಿಂದ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಡುತ್ತಿರುವ ವೇಳೆ ಪೊದೆಯಿಂದ ಜಿಗಿದು ಏರ್ಪೋರ್ಟ್ ಕಾಂಪೌಂಡ್ ಒಳಗೆ ಹಾರಿ ಪೊದೆಯೊಳಗೆ ಸೇರಿಕೊಂಡಿತ್ತು. ಇದೀಗ ಅರಣ್ಯ ಇಲಾಖೆ ಅರವಳಿಕೆ ನೀಡಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳೀಯರ ಮೊಬೈಲ್ನಲ್ಲಿ ಕರಡಿ ಓಡಾಟದ ದೃಶ್ಯಗಳು ಸೆರೆಯಾಗಿದೆ. ಸೋಮವಾರ ಬೆಳಿಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರ, ಜ್ಯೋತಿ ನಗರದಲ್ಲಿ ಕರಡಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ್ದರು.ಕರಡಿ ಸೆರೆಹಿಡಿಯಲ ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು ವಿಮಾನ ನಿಲ್ದಾಣದೊಳಗೆ ನುಗ್ಗಿರುವ ಕರಡಿಯ ಕತ್ತಿನಲ್ಲಿ ರೇಡಿಯೋ ಕಾಲರ್ ಕೂಡ ಇದೆ. ಕರಡಿ ಸಂಚಾರ ವಿಷಯ ತಿಳಿಯುತ್ತಿದ್ದಂತೆ ಉಂಬ್ಳೆಬೈಲು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು. ಜನಸಂದಣಿ ಹೆಚ್ಚಾದ ಹಿನ್ನೆಲೆ ಕರಡಿ ಭಯಗೊಂಡು ವಿಮಾನ ನಿಲ್ದಾಣಕ್ಕೆ ನುಗ್ಗಿದೆ. ನಂತರ ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಕಾಣಿಸಿಕೊಂಡಿದೆ. ಕರಡಿಗೆ ಎರಡು ಅರಿವಳಿಕೆ ಮದ್ದು ನೀಡಿ ಕೊನೆಗೂ ಸೆರೆಹಿಡಿದ್ದಾರೆ . ಜನಸಂದಣಿ ಹೆಚ್ಚಾದ ಹಿನ್ನೆಲೆ ಕರಡಿ ಭಯಗೊಂಡು ವಿಮಾನ ನಿಲ್ದಾಣಕ್ಕೆ ನುಗ್ಗಿದೆ. ನಂತರ ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಕಾಣಿಸಿಕೊಂಡಿದೆ. ವನ್ಯಜೀವಿ ವಿಭಾಗದ ಪಶು ವೈದ್ಯ ಮುರುಳಿ ಮನೋಹರ್ ನೀಡಿದ ಕರಡಿಗೆ ಎರಡು ಅರಿವಳಿಕೆ ಮದ್ದು ನೀಡಿ ಕೊನೆಗೂ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ.ಬಳಿಕ ಕರಡಿ ಸೆರೆಹಿಡಿದು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.
ಇತರೆ ಸುದ್ದಿಗಳು