ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹನುಮ ಜಯಂತಿ ಮೆರವಣಿಗೆ ಶಾಂತಿಯುತವಾಗಿರಲಿ: ಎಸ್‌.ಪಿ. ವಿಷ್ಟುವರ್ದನ್ ಮನವಿ
ವರದಿಗಾರರು : - ಕೆಂಡೇಶ್ ಸೂರ್ಯ | ಸ್ಥಳ : ಹುಣಸೂರು* | ದಿನಾಂಕ : 27-11-2025

ಹನುಮ ಜಯಂತಿ ಮೆರವಣಿಗೆ ಶಾಂತಿಯುತವಾಗಿರಲಿ: ಎಸ್‌.ಪಿ. ವಿಷ್ಟುವರ್ದನ್ ಮನವಿ

ಹುಣಸೂರು: ಡಿಸೆಂಬರ್ 4ರಂದು ನಡೆಯಲಿರುವ ಹನುಮ ಜಯಂತಿ ಮೆರವಣಿಗೆಯನ್ನು ಸೌಹಾರ್ದಯುತವಾಗಿ, ಶಾಂತಿಯುತವಾಗಿ ಆಚರಿಸಲು ಎಲ್ಲ ವರ್ಗದ ನಾಗರಿಕರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ದನ್ ಮನವಿ ಮಾಡಿದರು. ನಗರ ಠಾಣೆಯಲ್ಲಿ ಸೋಮವಾರ ಆಯೋಜಿಸಿದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹುಣಸೂರು ಸದಾ ಶಾಂತಿಪ್ರಿಯರ ಊರಾಗಿ ಹೆಸರುವಾಸಿಯಾಗಿದೆ ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಡಿ.ಜೆ. ನಿಷೇಧ – ಜಾನಪದ ಕಲೆಗೆ ಆದ್ಯತೆ ಮೆರವಣಿಗೆಯಲ್ಲಿ ಡಿ.ಜೆ. ಪರಿಕರಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬದಲಾಗಿ ಜಾನಪದ ಕಲಾತಂಡಗಳು, ಡೊಳ್ಳು ಕುಣಿತ, ತಮಟೆ ಸೇರಿದಂತೆ ಸಾಕಷ್ಟು ಪರಂಪರೆಯ ಕಲಾವಿದರನ್ನು ಆಮಂತ್ರಿಸಲು ಸಲಹೆ ನೀಡಿದರು. ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ಅಳವಡಿಸಿದರೆ ಅವನ್ನು ತೆರವುಗೊಳಿಸುವ ಜವಾಬ್ದಾರಿಯೂ ಆಯೋಜಕರ ಮೇಲಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ ಜಯಂತಿ ವೇಳೆಯಲ್ಲಿ ಸಾಮಾಜಿಕ ಜಾಲತಾಣಗಳ ದುರ್ಬಳಕೆ ಸಂಭವನೀಯ. ಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆಯಿಂದ ಇರಬೇಕೆಂದು ಎಸ್‌.ಪಿ. ಎಚ್ಚರಿಸಿದರು. ಸಂದೇಶಗಳ ಸತ್ಯಾಸತ್ಯತೆ ಕುರಿತು ಅನುಮಾನವಿದ್ದಲ್ಲಿ ಬೀಟ್ ಪೊಲೀಸ್ ಅಥವಾ ಅಧಿಕಾರಿಗಳೊಂದಿಗೆ ಪರಿಶೀಲಿಸಿ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಹೇಳಿದರು. ಮೆರವಣಿಗೆಯ ಸುಸೂತ್ರ ನಿರ್ವಹಣೆಗೆ ಕನಿಷ್ಠ 150 ಸ್ವಯಂಸೇವಕರನ್ನು ನೇಮಿಸಿಕೊಳ್ಳುವಂತೆ ಸಮಿತಿಗೆ ಸಲಹೆ ನೀಡಿದರು.

ಮೂರು ದಿನಗಳ ಹನುಮೋತ್ಸವ ಕಾರ್ಯಕ್ರಮ ತಾಲೂಕು ಹನುಮಂತೋತ್ಸವ ಸಮಿತಿ ಅಧ್ಯಕ್ಷ ವಿ.ಎನ್. ದಾಸ್ ಮಾತನಾಡಿ, ಮೂರು ದಿನಗಳ ಜಯಂತಿ ಕಾರ್ಯಕ್ರಮ ವಿವರಿಸಿದರು. ಡಿ.2: ಹನುಮ ಪ್ರತಿಷ್ಠಾಪನೆ ಡಿ.3: ಸಾಂಸ್ಕೃತಿಕ ಕಾರ್ಯಕ್ರಮ ಡಿ.4: ಮೆರವಣಿಗೆ — ಬೆಳಗ್ಗೆ 11 ಗಂಟೆಗೆ ನಗರದ ರಂಗನಾಥ ಬಡಾವಣೆಯಿಂದ ಆರಂಭವಾಗಿ ಕಲ್ಕುಣಿಕೆ ವೃತ್ತ, ಶಬರಿಪ್ರಸಾದ್ ವೃತ್ತ, ಹಳೆಯ ಸೇತುವೆ, ಸಂವಿಧಾನ ವೃತ್ತ, ಎಸ್‌ಜೆ ರಸ್ತೆ, ಎಚ್.ಡಿ. ಕೋಟೆ ವೃತ್ತ, ಜೆಎಲ್‌ಬಿ–ಬಜಾರ್ ರಸ್ತೆ, ಹೊಸ ಬಸ್ ನಿಲ್ದಾಣ ಮತ್ತು ಕಲ್ಪತರು ವೃತ್ತಗಳ ಮೂಲಕ ಆಂಜನೇಯಸ್ವಾಮಿ ದೇವಾಲಯದ ಆವರಣಕ್ಕೆ ಸಂಜೆ ತಲುಪಲಿದೆ. 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಭಾಗವಹಿಸಲಿದ್ದು, ಮಜ್ಜಿಗೆ, ತಂಪುಪಾನೀಯ, ಉಪಹಾರಗಳನ್ನು ಸಾರ್ವಜನಿಕರು ಭಕ್ತರಿಗೆ ನೀಡಲಿದ್ದಾರೆ ಎಂದು ತಿಳಿಸಿದರು.

ಸೌಹಾರ್ದಕ್ಕೆ ಆದ್ಯತೆ ನೀಡಿ – ತಹಸೀಲ್ದಾರ್ ತಹಸೀಲ್ದಾರ್ ಜೆ. ಮಂಜುನಾಥ್ ಮಾತನಾಡಿ, ವಾಟ್ಸಾಪ್–ಇನ್‌ಸ್ಟಾಗ್ರಾಂ ಪೋಸ್ಟ್‌ಗಳಿಗೆ ಮಹತ್ವ ಕೊಡದೆ, ಸೌಹಾರ್ದತೆಯನ್ನು ಕಾಪಾಡಿಕೊಂಡು ಜಯಂತಿ ಆಚರಿಸೋಣ ಎಂದು ಮನವಿ ಮಾಡಿದರು. ಸಭೆಯಲ್ಲಿ ಹನುಮಂತೋತ್ಸವ ಗೌರವಾಧ್ಯಕ್ಷ ಎಚ್‌.ವೈ. ಮಹದೇವ್, ಖಾಲಿದ್‌, ನಗರಸಭೆ ಮಾಜಿ ಸದಸ್ಯ ಕೃಷ್ಣರಾಜ ಗುಪ್ತ, ಸೈಯದ್ ಯೂನೂಸ್, ಸಾಗರ್ ಬಾಗಲ್, ಅನಿಲ್ ಕುಮಾರ್, ವರದರಾಜ ಪಿಳ್ಳೆ, ರಾಘು ಕಲ್ಕುಣಿಕೆ, ಸಲ್ಮಾನ್, ಇಮ್ರಾನ್, ಅಯೂಬ್, ನಯಾಜ್, ಮುಜಾಮಿಲ್, ಸುಹೇಲ್, ಡಿವೈಎಸ್‌ಪಿ ರವಿ, ನಗರ ಠಾಣೆ ಇನ್ಸ್‌പೆಕ್ಟರ್ ಸಂತೋಷ್ ಕಶ್ಯಪ್, ನಗರಸಭೆ ಪರಿಸರ ಇಂಜಿನಿಯರ್ ಸೌಮ್ಯ ಹಾಗೂ ಹಲವರು ಭಾಗವಹಿಸಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+