ಅಧಿಕಾರ ಬಿಟ್ಟುಕೊಡಲು ಸಿ ಎಂ ರೆಡಿ ! ಶಾಕಿಂಗ್ ಹೇಳಿಕೆ ನೀಡಿದ ಕೆ ಏನ್ ರಾಜಣ್ಣ
ಬೆಂಗಳೂರು : ಬೆಂಗಳೂರಿನಲ್ಲಿ ಮಾತಾಡಿದ ಶಾಸಕ ಕೆ ಎನ್ ರಾಜಣ್ಣ ಅವರು ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಹೆಚ್ಚುತ್ತಿದೆ ಎಂದಿದ್ದು, ಸಿದ್ದರಾಮಯ್ಯ ಅವರ ಬಗ್ಗೆಯೂ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಾದಾಟ ಗರಿಗೆದರಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬಣದವರು ಕೂಡ ಮತ್ತೆ ಆ್ಯಕ್ಟಿವ್ ಆಗಿದ್ದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ಫೋಟಕ ಹೇಳಿಕೆಗಳನ್ನ ಕೊಡ್ತಿದ್ದಾರೆ. ನಾಯಕತ್ವ ಬದಲಾವಣೆ ಸಂಬಂಧ ತೆರೆಮರೆ ಸಮರ ಶುರುವಾಗಿದ್ದು, ಈ ಎಲ್ಲಾ ಬೆಳವಣಿಗೆಗಳ ನಡುವೆ ಮಾಜಿ ಸಚಿವ ಕೆಎನ್ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸೈಲೆಂಟ್ ಆಗಿದ್ದು, ಯಾರೋ ಮಾಟ-ಮಂತ್ರ ಮಾಡಿಸಿರಬೇಕು ಅಂತೆಲ್ಲಾ ಹೇಳಿದ್ದ ರಾಜಣ್ಣ ಇದೀಗ, ಸಿಎಂ ಕುರ್ಚಿ ಬಿಡೋಕು ಸಿದ್ದರಾಮಯ್ಯ ರೆಡಿಯಾಗಿದ್ದಾರೆ ಎನ್ನುವ ಅಚ್ಚರಿಯ ಕೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಶಾಸಕ ಕೆ ಎನ್ ರಾಜಣ್ಣ ಅವರು ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಹೆಚ್ಚುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರೆಯೋಕು ಸಿದ್ಧರಾಗಿದ್ದು, ಅಧಿಕಾರ ಬಿಟ್ಟು ಕೊಡಲು ಕೂಡ ರೆಡಿಯಾಗಿದ್ದಾರೆ ಎಂಬ ಅಚ್ಚರಿ ಹೇಳಿಕೆ ನೀಡಿದ್ದಾರೆ. ಗೊಂದಲ ಬಗೆಹರಿಸಿದ್ರೆ ರಾಜ್ಯಕ್ಕೆ ಒಳ್ಳೆಯದು. ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು. ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ದರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ ಪಕ್ಷ ಹಾಗೂ ಕರ್ನಾಟಕದ ಜನತೆಯ ಭವಿಷ್ಯ ಇದರಲ್ಲಿ ಅಡಗಿದೆ ಎಂದ್ರು ರಾಜಣ್ಣ.