ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಟ ದರ್ಶನ್ ಗೆ ಬಾರಿ ಹಿನ್ನೆಡೆ ! ಜಾಮೀನು ಅರ್ಜಿ ತಿರಸ್ಕರಿದ ಕೋರ್ಟ್,ಇನ್ನು ಒಂದು ವರ್ಷ ಜೈಲು ಖಾಯಂ
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 15-05-2026

ನಟ ದರ್ಶನ್ ಗೆ ಬಾರಿ ಹಿನ್ನೆಡೆ ! ಜಾಮೀನು ಅರ್ಜಿ ತಿರಸ್ಕರಿದ ಕೋರ್ಟ್,ಇನ್ನು ಒಂದು ವರ್ಷ ಜೈಲು ಖಾಯಂ

ದರ್ಶನ್​ ಜಾಮೀನು ಅರ್ಜಿ ಕುರಿತು ಸುಪ್ರೀಂ ಕೋರ್ಟ್​ ತೀರ್ಪು ನೀಡಿದೆ . ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲಿದ್ದು, ಇತ್ತೀಚೆಗಷ್ಟೆ ಸುಪ್ರೀಂ ಕೋರ್ಟ್​ನಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್‌ ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಆದೇಶದಿಂದ ಮುಂದಿನ ವರ್ಷ ಮೇ 15ರವರೆಗೆ ದರ್ಶನ್‌ಗೆ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಇಂದು ದರ್ಶನ್‌ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ದರ್ಶನ್ ಪರ ವಕೀಲರು, “ಜೈಲಿನಲ್ಲಿ ದರ್ಶನ್ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದ್ದು, ಯಾರೊಂದಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕೇವಲ ಗ್ಲಾಸ್ ತಡೆಗೋಡೆ ಮೂಲಕ ಅವಕಾಶ ನೀಡಲಾಗುತ್ತಿದೆ. 9 ತಿಂಗಳಿನಿಂದ ಜೈಲಿನಲ್ಲಿದ್ದಾರೆ” ಎಂದು ವಾದ ಮಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ ಆಗಿದೆ. ಸ್ಪೆಷಲ್ ಟ್ರೀಟ್‌ಮೆಂಟ್ ಸಿಗಬಾರದು ಎಂಬ ಉದ್ದೇಶದಿಂದ ಅಲ್ಲಿ ಇರಿಸಿರಬಹುದು. ಜೈಲು ಮ್ಯಾನ್ಯುಯಲ್ ಪ್ರಕಾರ ಅಗತ್ಯ ಸೌಲಭ್ಯಗಳನ್ನು ನೀಡಲು ಸೂಚಿಸುತ್ತೇವೆ” ಎಂದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಇಂದು (ಮೇ 15) ದರ್ಶನ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+