ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ  ಗುಡುಗಿದ ಸಿ ಎಂ
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 09-04-2026

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಾಸ್ಪದವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿ ಎಂ ಸಿದ್ದರಾಮಯ್ಯ ಗುಡುಗಿದ್ದಾರೆ . ನಿಮ್ಮ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ ‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ . ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದ್ದು, ಇದರ ಬೆನ್ನಲ್ಲೇ ಆಯೋಗದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಆದರೆ, ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ. ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು 'ಬಿಟ್ಟಿ ಭಾಗ್ಯ' ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 959+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4008+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4048+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4105+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4207+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4255+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4287+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4331+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4379+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4392+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4466+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4526+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6748+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6809+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6860+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6915+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7077+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7105+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7235+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7416+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9619+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9784+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9845+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10017+