ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸಿಎಂ - ಡಿಸಿಎಂ ಕಿತ್ತಾಟದಿಂದ ಅಭಿವೃದ್ಧಿ ಹಿನ್ನಡೆ: ಸಂಸದ ಶೆಟ್ಟರ್
ವರದಿಗಾರರು : ಬೆಳಗಾವಿ | ಸ್ಥಳ : ಬಸವರಾಜ್ | ದಿನಾಂಕ : 01-12-2025

ಸಿಎಂ - ಡಿಸಿಎಂ ಕಿತ್ತಾಟದಿಂದ ಅಭಿವೃದ್ಧಿ ಹಿನ್ನಡೆ: ಸಂಸದ ಶೆಟ್ಟರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಶೀಘ್ರವೇ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬರಲಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಕ್ಕೆಜೋಳ, ಹೆಸರು, ಉದ್ದು ಬೆಳೆ ಖರೀದಿ ಕೇಂದ್ರ ಆರಂಭ ಆಗಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ. ಭ್ರಷ್ಟಾಚಾರ ‌ಮೀತಿ ಮೀರಿದೆ. ಸಿದ್ದರಾಮಯ್ಯ ತಮ್ಮ ಆಡಳಿತದ ಬಿಗಿ ಕಳೆದುಕೊಂಡಿದ್ದಾರೆ. ರಾಜ್ಯದ ಖಜಾನೆಯಲ್ಲಿ ಹಣ ಇಲ್ಲ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಮಗಾರಿ ಕುಂಠಿತವಾಗಿವೆ. ಸರ್ಕಾರ ಜೀವಂತ ವ್ಯವಸ್ಥೆಯಲ್ಲಿ ಇಲ್ಲ. ಸರ್ಕಾರ ಆವೃತ್ತ ನಿಧಿಯಲ್ಲಿ ಹಣವನ್ನು ಇಡಬೇಕಾಗುತ್ತದೆ. ಆದರೆ, ಸದ್ಯದ ಸ್ಥಿತಿ ನೋಡಿದರೆ ಆವೃತ್ತ ನಿಧಿಯಲ್ಲಿ ಹಣ ಇಲ್ಲವೇ? ಮೆಕ್ಕೆಜೋಳ, ಉದ್ದು ಹೆಸರು ಬೆಳೆಗೆ ಬೆಂಬಲ ಬೆಲೆ ನೀಡದಿರುವುದರಿಂದ ರೈತರು ಬೀದಿಗೆ ಬಿದ್ದಿದ್ದಾರೆ. ಇದು ಸರ್ಕಾರದ ಬೇಜವಾಬ್ದಾರಿಯ ಪರಮಾವಧಿ ಆಗಿದೆ. ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಕೇಂದ್ರದ ಮೇಲೆ ಬೊಟ್ಟು ಮಾಡಿ ತೋರಿಸುವ ರಾಜ್ಯ ಸರ್ಕಾರಕ್ಕೆ ಬೆಲೆ ನಿಗದಿ ಅಧಿಕಾರ ಇಲ್ಲ ಎನ್ನುವ ಸಕ್ಕರೆ ಸಚಿವರು, ಎಸ್‌ಎಪಿ ಕಾನೂನನ್ನು ಅರಿಯಬೇಕಿದೆ. ಎಫ್‌ಆರ್‌ಪಿ ನಿಗದಿಯನ್ನು ಕೇಂದ್ರ ಸರ್ಕಾರ ಮಾಡುತ್ತದೆ ನಿಜ. ಆದರೆ, ಎಸ್‌ಎಪಿಯನ್ನು ರಾಜ್ಯ ಸರ್ಕಾರ ಮಾಡಬೇಕು. ಈ ಕಾನೂನು ರಾಜ್ಯ ಸರ್ಕಾರಕ್ಕೆ ಗೊತ್ತಿಲ್ಲವೇ? ಸರ್ಕಾರ ಅಂಧಾದುಂದಿ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅ‍ವರು ಹೈಕಮಾಂಡ್‌ ತೀರ್ಮಾನ ಕೈಗೊಳ್ಳುತ್ತದೆ ಎಂದು ಅಸಹಾಯಕತೆಯ ಹೇಳಿಕೆ ಕೊಟ್ಟಿದ್ದಾರೆ. ಅಂದರೆ ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಯಾರು? ಕೂಡಲೇ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕೇಂದ್ರ ಯೋಜನೆಗಳ ಕಾಮಗಾರಿ ವಿಳಂಬ ಬೆಳಗಾವಿ- ಧಾರವಾಡ ಹೊಸ ರೈಲು ಯೋಜನೆಗೆ ದಿ.ಸುರೇಶ ಅಂಗಡಿ ₹927 ಕೋಟಿ ಅನುದಾನ ಮಂಜೂರು ಮಾಡಿಸಿದ್ದರು. ಭೂಸ್ಥಾದೀನ ಪ್ರಕ್ರಿಯೆ ಮುಗಿದಿದೆ. 406 ಎಕರೆ ಭೂಮಿ ಸ್ವಾಧೀನಕ್ಕಾಗಿ ₹129 ಕೋಟಿ ಪರಿಹಾರ ಹಣ ಬಿಡುಗಡೆ ಮಾಡಬೇಕು. ಆದರೆ, ಈವರೆಗೆ ಒಂದು ರುಪಾಯಿ ಹಣ ಬಿಡುಗಡೆ ‌ಆಗಿಲ್ಲ. ಭೂಸ್ವಾಧೀನದ ಹಣ ಏರಿಕೆಯಾಗಲಿದೆ. ಮುಖ್ಯಮಂತ್ರಿ ಸಹಾಯಕತೆ ತೋರಿಸಿದ ಮೇಲೆ ಬಹಿರಂಗ ಪತ್ರ ಬರೆಯುತ್ತೇನೆ. ಈ ವಿಚಾರದಲ್ಲಿ ಸರ್ಕಾರ ಮೌನ ವಹಿಸಿದೆ. ಸ್ಮಾರ್ಟ್‌ಸಿಟಿ-2 ಗೆ ₹130 ಕೋಟಿ ಮಂಜೂರು ಆಗಿದೆ ಎಂದರು.

ಘನತ್ಯಾಜ್ಯ ವಿಲೇವಾರಿಗೆ ಕೇಂದ್ರದಿಂದ ಹಣ ಬಿಡುಗಡೆ. ಹಣ ಉಪಯೋಗ ಮಾಡಿಲ್ಲ, ವಾಪಸ್ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಅಮೃತ-2 ಯೋಜನೆಯಲ್ಲಿ 7 ಕೆರೆ, 7 ಉದ್ಯಾನ ಅಭಿವೃದ್ಧಿಗೆ ₹ 40 ಕೋಟಿ ಬಿಡುಗಡೆ ಆಗಿದೆ. ಈ ಹಣವನ್ನು ಉಪಯೋಗ ಮಾಡುತ್ತಿಲ್ಲ. ಅಧಿಕಾರಿಗಳು ಈ ಬಗ್ಗೆ ಗಮನವೇ ಹರಿಸುತ್ತಿಲ್ಲ ಎಂದು ಹೇಳಿದರು. ಸವದತ್ತಿ ಯಲ್ಲಮ್ಮ ದೇವಾಲಯ ಅಭಿವೃದ್ಧಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ₹ 118ಕೋಟಿ ಕೇಂದ್ರ ಸರ್ಕಾರದಿಂದ ಬಂದಿದೆ. ₹ 300ಕೋಟಿ ರಾಜ್ಯ ಸರ್ಕಾರ ಹಣ ಘೋಷಣೆ ಮಾಡಿದೆ. ಈವರೆಗೆ ಒಂದು ರುಪಾಯಿಯನ್ನು ಬಿಡುಗಡೆ ಮಾಡಿಲ್ಲ. ಈ ಎಲ್ಲಾ ವಿಚಾರ ಮುಂದಿಟ್ಟು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವೆ. ಪ್ರವಾಸೋದ್ಯಮ, ಮುಜರಾಯಿ ಇಲಾಖೆ ಫೈಟ್ ನಡೆಯುತ್ತಿದೆ. ಸಿಎಂ, ಡಿಸಿಎಂ ಅಷ್ಟೇ ಇಲಾಖೆಯಲ್ಲಿಯೂ ಫೈಟ್ ನಡೆಯುತ್ತಿದೆ. ಒಂದು ಪೈಸಾದಷ್ಟು ಟೆಂಡರ್ ಕೆಲಸ ಆಗಿಲ್ಲ. ಸರ್ಕಾರ ಜೀವಂತ ಹೆಣವಾಗಿರುವುದರಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಆರೋಪಿಸಿದರು.

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಖಂಡ ಕರ್ನಾಟಕ ಏಕೀಕರಣದ ಕುರಿತು ಬಹಿರಂಗ ಚರ್ಚೆಯಾಗಬೇಕಿದೆ. ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಬೇಕು. ಆಡಳಿತ ಜನತೆಯ ಬಳಿ ಹೋಗಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಂ.ಬಿ.ಜಿರಲಿ, ಸಂಜಯ ಪಾಟೀಲ, ಅನಿಲ ಬೆನಕೆ, ಹಣಮಂತ ಕೊಂಗಾಲಿ, ರಮೇಶ ದೇಶಪಾಂಡೆ ಇತರರು ಹಾಜರಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+