ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಾಯಕತ್ವ ಚರ್ಚೆ ಅನಗತ್ಯ: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ
ವರದಿಗಾರರು : ಕೆ ಜಿ ಸುರೇಶ | ಸ್ಥಳ : ಹಾಸನ | ದಿನಾಂಕ : 29-11-2025

ನಾಯಕತ್ವ ಚರ್ಚೆ ಅನಗತ್ಯ: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ

ಹಾಸನ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗಳು ವಾಸ್ತವಕ್ಕಿಂತ ಹೆಚ್ಚು ಅತಿಶಯೋಕ್ತಿಯಾಗಿದೆ, ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಹಾಸನ ನಗರದಲ್ಲಿ ಮುಖ್ಯಮಂತ್ರಿಗಳ ಭೇಟಿ ವ್ಯವಸ್ಥೆ ಪರಿಶೀಲಿಸಿ ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು ಮಾತನಾಡಿದರು. “ನನಗೆ ಈಗ ಕೆಲಸ ತುಂಬಾ ಕೊಟ್ಟಿದ್ದಾರೆ; ಅದನ್ನೇ ನಾನು ಮಾಡುತ್ತೇನೆ. ಹೊಟ್ಟೆಗೆ ಹಿಟ್ಟು ಇಲ್ಲದೆ ಜುಟ್ಟಿಗೆ ಮಲ್ಲಿಗೆ ಹೂ ಎಂಬಂತೆ ಜನರಿಗೆ ಪ್ರಯೋಜನವಿಲ್ಲದ ಚರ್ಚೆಗಳಲ್ಲಿ ನಾನು ಭಾಗವಹಿಸುವುದಿಲ್ಲ,” ಎಂದು ಸಚಿವರು ಸ್ಪಷ್ಟಪಡಿಸಿದರು. ಮಠಾಧೀಶರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ವಿಷಯಕ್ಕೆ ಅತಿರೇಕದ ಉತ್ಪ್ರೇಕ್ಷೆ ನೀಡುವ ಅವಶ್ಯಕತೆ ಇಲ್ಲ. ಚರ್ಚೆಗೆ ಮಿತಿ ಇರಬೇಕು,” ಎಂದರು.

ಬೆಳೆ ಪರಿಹಾರ—ಕೇಂದ್ರದಿಂದ ನೆರವಿಗೆ ನಿರೀಕ್ಷೆ ರಾಜ್ಯ ಸರ್ಕಾರ ಈಗಾಗಲೇ ₹2251 ಕೋಟಿ ಬೆಳೆ ಪರಿಹಾರವನ್ನು ರೈತರಿಗೆ ವಿತರಿಸಿದೆ ಎಂದು ಸಚಿವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಯಾದ ಮೂಲಸೌಕರ್ಯಗಳಿಗೆ ಕೇಂದ್ರ ಸರ್ಕಾರದಿಂದ ₹1521 ಕೋಟಿ ನೆರವು ಕೋರಿ ಮನವಿ ಸಲ್ಲಿಸಲಾಗಿದೆ. “ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಿರುವುದರಿಂದ ರಾಜ್ಯಕ್ಕೆ ನ್ಯಾಯ ದೊರಕಬೇಕೆಂಬ ಭರವಸೆ ಜನತೆಗೆ ನೀಡಬೇಕು,” ಎಂದು ಅವರು ಒತ್ತಾಯಿಸಿದರು. ಎಂಎಸ್‌ಪಿ ಕುರಿತು ಮಾತನಾಡಿದ ಅವರು, “ಕೇಂದ್ರ ಸರ್ಕಾರ ಘೋಷಣೆ ಮಾಡಿದರೂ ಬೆಂಬಲ ಬೆಲೆ ಜಾರಿ ಮಾಡಲು ವಿಫಲವಾಗಿದೆ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಸಂಸದರು ಮೌನವಾಗಿದ್ದಾರೆ,” ಎಂದು ಟೀಕಿಸಿದರು

ಹಾಸನ ಜಿಲ್ಲೆಯಲ್ಲಿ ದಾಖಲೆ ಮಟ್ಟದ ಜಮೀನು ಸರ್ವೆ ಹಾಸನದಲ್ಲಿ 15,000 ಜಮೀನುಗಳ ಅಳತೆ ಪೂರ್ಣಗೊಂಡಿದ್ದು, 24,000 ರೈತರಿಗೆ ಪೋಡಿ ಮತ್ತು ಹಕ್ಕುಪತ್ರ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿ ಇದೆ. “ಕಳೆದ 14 ವರ್ಷಗಳಲ್ಲಿ ಜಿಲ್ಲೆಯಲ್ಲಿ ಕೇವಲ 2,444 ಜಮೀನುಗಳಿಗೆ ಮಾತ್ರ ಸರ್ವೆ ನಡೆಸಲಾಗಿದೆ. ಈ ಬಾರಿ 2 ತಿಂಗಳಲ್ಲಿ 10,000 ಜಮೀನು ಸರ್ವೆ ಮಾಡುವ ಗುರಿ ಹೊಂದಿದ್ದೇವೆ,” ಎಂದರು.

ಸಿ.ಎಂ. ಚಾಲನೆ ನೀಡಲಿರುವ ₹250 ಕೋಟಿ ಅಭಿವೃದ್ಧಿ ಯೋಜನೆಗಳು ಡಿ. 6 ರಂದು ಮುಖ್ಯಮಂತ್ರಿ ಹಾಸನ ಜಿಲ್ಲೆಯಲ್ಲಿ ಕೆಳಗಿನ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ: ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ – ₹55 ಕೋಟಿ ಚನ್ನರಾಯಪಟ್ಟಣ ನೀರಾವರಿ ಯೋಜನೆ – ₹74 ಕೋಟಿ ಇತರೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿ ಒಟ್ಟು ₹250 ಕೋಟಿ ಈ ಸಂದರ್ಭದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾಕುಮಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಭೆಯಲ್ಲಿ ಸಚಿವರು ನೀಡಿದ ಮುಖ್ಯ ನಿರ್ದೇಶನಗಳು ಕಾರ್ಯಕ್ರಮಗಳಿಗೆ ಅನಗತ್ಯ ದುಂದು ವೆಚ್ಚ ಮಾಡಬಾರದು. ಫಲಾನುಭವಿಗಳಿಗೆ ಹಕ್ಕುಪತ್ರ, ಕ್ರಯಪತ್ರ, ಇ-ಸ್ವತ್ತು ಕಡ್ಡಾಯವಾಗಿ ನೀಡಬೇಕು. ನಾಮಮಾತ್ರದ ಹಕ್ಕುಪತ್ರ ವಿತರಣೆ ನಿಲ್ಲಿಸಿ 100% ಇ-ಸ್ವತ್ತು ಮಾಡಲು ಸೂಚನೆ. “ಪೌತಿಖಾತೆ ಆಂದೋಲನ" ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಫಲಾನುಭವಿಗಳಿಗಾಗಿ ಸುರಕ್ಷಿತ ಸಂಚಾರ, ಆಹಾರ ವ್ಯವಸ್ಥೆ, ದಾಖಲೆಗಳ ಸುರಕ್ಷತೆ ಖಚಿತಪಡಿಸಬೇಕು. ವಿಎ, ಪಿಡಿಓಗಳು ಕರೆತಂದ ಜನರಿಗೆ ಸಂಪೂರ್ಣ ಜವಾಬ್ದಾರರಾಗಿರಬೇಕು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39049+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39138+