ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಜಿಎಂಐಟಿ ವಿದ್ಯಾರ್ಥಿಗಳಿಗೆ ಉದ್ಯೋಗವಾಯ್ಸು – Infosys, SLK ಸೇರಿದಂತೆ ಹಲವಾರು ಕಂಪನಿಗಳಲ್ಲಿ ಆಯ್ಕೆ
ವರದಿಗಾರರು : ದರ್ಶನ್ ಎಂ ಎನ್ | ಸ್ಥಳ : ದಾವಣಗೆರೆ | ದಿನಾಂಕ : 27-11-2025

ದಾವಣಗೆರೆ: ಜಿಎಂಐಟಿ ವಿದ್ಯಾರ್ಥಿಗಳಿಗೆ ಉದ್ಯೋಗವಾಯ್ಸು – Infosys, SLK ಸೇರಿದಂತೆ ಹಲವಾರು ಕಂಪನಿಗಳಲ್ಲಿ ಆಯ್ಕೆ

ದಾವಣಗೆರೆ, 27 ನವೆಂಬರ್ 2025: ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಜಿಎಂಐಟಿ) ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನಗಳಲ್ಲಿ ಇಂಜಿನಿಯರಿಂಗ್ ವಿಭಾಗದ 70ಕ್ಕೂ ಅಧಿಕ ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಪಡೆದಿದ್ದಾರೆ ಎಂದು ಪ್ರಾಂಶುಪಾಲ ಡಾ. ಸಂಜಯ್ ಪಾಂಡೆ ಎಂ.ಬಿ. ತಿಳಿಸಿದ್ದಾರೆ. ವಿಭಾಗವಾರು ಆಯ್ಕೆಗಳು: ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಶನ್ ಸೈನ್ಸ್, ಎಐ & ಎಮ್‌ಎಲ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್: 13 ವಿದ್ಯಾರ್ಥಿಗಳು Infosys ನಲ್ಲಿ ಆಯ್ಕೆಯಾಗಿದ್ದಾರೆ. SLK ಸಾಫ್ಟ್‌ವೇರ್: 38 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಎಲೆಕ್ಟ್ರಿಕಲ್ ಇಂಜಿನಿಯರಿಂಗ್: ಪಾರಾಸ್ ಇಂಜಿನಿಯರಿಂಗ್ ಲಿಮಿಟೆಡ್. ಬಯೋಟೆಕ್ನಾಲಜಿ: ಓಮೆಗಾ ಹೆಲ್ತ್ ಕೇರ್. ಮೆಕ್ಯಾನಿಕಲ್ ಇಂಜಿನಿಯರಿಂಗ್: ವಿಜಯ್ ಸ್ಪೈರಡಲ್ಸ್ ಮತ್ತು ಜಾನ್ಸನ್ ಲಿಫ್ಟ್ಸ್ & ಎಲಿವೆಟರ್ಸ್. ಇನ್ನಷ್ಟು ಕಂಪನಿಗಳು ಮುಂದಿನ ದಿನಗಳಲ್ಲಿ ನೇಮಕಾತಿ ಮಾಡುವ ನಿರೀಕ್ಷೆಯಿದ್ದು, ಕೆಲವು ಕಂಪನಿಗಳ ಸಂದರ್ಶನ ಫಲಿತಾಂಶ ಇನ್ನೂ ಬರುವಂತಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 400ಕ್ಕೂ ಅಧಿಕ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ. ತರಬೇತಿ ಮತ್ತು ಮಾರ್ಗದರ್ಶನ: ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರು ಅಕ್ಷರ ಪಿ ಮತ್ತು ವಿಲಾಸ್ ವಾಟ್ವೆ ಹಾಗೂ ಸಹಾಯಕರು ಆಕಾಶ್ ಗೌಡ, ಸುನಿಲ್ ಕುಮಾರ್ ಎಂ.ಸಿ., ಅವಿನಾಶ್ ಅಶ್ವಿಕ್ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ತರಬೇತಿ ಮತ್ತು ಮಾರ್ಗದರ್ಶನ ನೀಡುತ್ತಿದ್ದಾರೆ. ಅವರು ಪ್ರಸ್ತುತ ಆರ್ಥಿಕ ಹಿಂಜರಿತದ ಸಮಯದಲ್ಲಿಯೂ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ಮಹತ್ವಪೂರ್ಣ ಯಶಸ್ಸು ಕಂಡಿದ್ದಾರೆ ಎಂದು ಹೇಳಿದ್ದಾರೆ. ಅಭಿನಂದನೆ: ಆಯ್ಕೆಯಾದ ವಿದ್ಯಾರ್ಥಿಗಳನ್ನು ಜಿಎಂಐಟಿ ಕುಲಾಧಿಪತಿಗಳು ಶ್ರೀ ಜಿ.ಎಂ. ಲಿಂಗರಾಜು, ಆಡಳಿತಾಧಿಕಾರಿಗಳು ಶ್ರೀ ವೈ.ಯು. ಸುಭಾಷ್ಚಂದ್ರ, ಕುಲಪತಿಗಳು ಡಾ. ಎಸ್.ಆರ್. ಶಂಕಪಾಲ್, ಉಪ ಕುಲಪತಿಗಳು ಡಾ. ಎಚ್.ಡಿ. ಮಹೇಶಪ್ಪ, ಕುಲಸಚಿವ ಡಾ.ಸುನಿಲ್ ಕುಮಾರ್ ಬಿ.ಎಸ್. ಹಾಗೂ ವಿವಿಧ ವಿಭಾಗದ ಮುಖ್ಯಸ್ಥರುಗಳು ಅಭಿನಂದಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+