ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್ ಅಮಾನತು !
ಬೆಂಗಳೂರು: ಬೆಂಗಳೂರಿನ ಕಾಲೇಜು ಒಂದರಲ್ಲಿ ವಿದ್ಯಾರ್ಥಿಯನ್ನು ಪ್ರೊಫೆಸರ್ ಒಬ್ಬರು ಭಯೋತ್ಪಾದಕ ಎಂದು ಕರೆದಿದ್ದಾರೆ. ಬನಶಂಕರಿ ರಿಂಗ್ ರೋಡ್ನಲ್ಲಿರುವ ಒಂದು ಖಾಸಗಿ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಒಬ್ಬರು ವಿದ್ಯಾರ್ಥಿಯನ್ನ ಟೆರರಿಸ್ಟ್ ಎಂದು ಕರೆದು ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ಬೆನ್ನಲ್ಲೇ ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಸದ್ಯ ತರಗತಿಯಲ್ಲಿ ನಡೆದ ಘಟನೆಯು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪ್ರೊಫೆಸರ್ ಒಬ್ಬರು ತರಗತಿಯಲ್ಲಿ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದು ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದೆ. ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ಅವರು ಪಾಠ ಮಾಡುತ್ತಿರುವಾಗ ತರಗತಿಯಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳ ಮುಂದೆ ಒಬ್ಬ ಮುಸ್ಲಿಂ ವಿದ್ಯಾರ್ಥಿಯನ್ನು ನೇರವಾಗಿ ಭಯೋತ್ಪಾದಕ ಎಂದು ಕರೆದಿದ್ದಾರೆ ಎಂದು ಆರೋಪವಿದೆ. ಈ ಘಟನೆಯ ದೃಶ್ಯವನ್ನು ವಿದ್ಯಾರ್ಥಿಯೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಇತರೆ ಸುದ್ದಿಗಳು