ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆ : ಸಂಚಾರ ನಿರ್ಬಂಧ
ವರದಿಗಾರರು : Shahid | ಸ್ಥಳ : kampli | ದಿನಾಂಕ : 20-08-2025

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆ : ಸಂಚಾರ ನಿರ್ಬಂಧ

ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆಯಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆಯಾಗಿದೆ. ಇದರಿಂದಾಗಿ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ. ತುಂಗಾ, ಭದ್ರಾ, ವರದಾ ನದಿಗಳು ಉಕ್ಕಿ ಹರಿಯುತ್ತಿದ್ದೂ ತುಂಗಭದ್ರಾ ನದಿಗೆ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ

ಇನ್ನು ತುಂಗಭದ್ರಾ ಜಲಾಶಯದ ಕೆಲ ಗೇಟ್‌ಗಳು ಬೆಂಡಾದ ಕಾರಣ ಜಲಾಶಯದಲ್ಲಿ 80 ಟಿಎಂಸಿಯಷ್ಟು ನೀರನ್ನು ಮಾತ್ರ ಶೇಖರಿಸಿಡಲು ತೀರ್ಮಾನಿಸಿದೆ. ಆದ್ದರಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಬಂದ ನೀರನ್ನೆಲ್ಲ ನದಿಗೆ ಹರಿಬಿಡಲಾಗುತ್ತಿದೆ. ಸೋಮವಾರ ಜಲಾಶಯದಿಂದ 1 ಲಕ್ಷ ಕ್ಯುಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಮತ್ತೆ ಮುಳುಗಡೆಯಾಗಿದೆ. ಅಲ್ಲದೇ ಕೋಟೆ ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗುವ ಆತಂಕ ಉಂಟಾಗಿದೆ. ನದಿ ಪಾತ್ರದ ಜಮೀನುಗಳಲ್ಲಿನ ಬೆಳೆಗಳು ಜಲಾವೃತಗೊಂಡು ಬೆಳೆ ನಷ್ಟ ಉಂಟಾಗುವ ಆತಂಕದಲ್ಲಿ ರೈತರಿದ್ದಾರೆ.

ಸಂಚಾರ ನಿರ್ಬಂಧ: ಸೇತುವೆ ಮೇಲಿನ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಭಾನುವಾರ ಗಂಗಾವತಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆದೇಶ ಹೊರಡಿಸಿದ್ದಾರೆ. ಸೇತುವೆ ಇನ್ನು ಮುಳುಗಡೆಗೊಳ್ಳದ ಕಾರಣ ಆದೇಶದ ನಡುವೆಯೂ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೋಮವಾರ ಮಧ್ಯಾಹ್ನದ ವರೆಗೂ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅನುವು ಕಲ್ಪಿಸಲಾಗಿತ್ತು. ಮಧ್ಯಾಹ್ನ ನಂತರ ದ್ವಿಚಕ್ರ ವಾಹನಗಳ ಸಂಚಾರ ಹಾಗೂ ಪಾದಚಾರಿಗಳಿಗೆ ಮಾತ್ರ ಅನುವು ನೀಡಲಾಗಿತ್ತು. ಸಂಜೆ ದ್ವಿಚಕ್ರ ವಾಹನ ಸಂಚಾರಕ್ಕೂ ನಿರ್ಬಂಧ ಹೇರಿ ಪಾದಚಾರಿಗಳಿಗೆ ಮಾತ್ರ ಅನುವು ಕಲ್ಪಿಸಲಾಯಿತು.

ಹಸೀಲ್ದಾರ್ ಭೇಟಿ ಪರಿಶೀಲನೆ: ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆ ಬಳಿ ತಹಸೀಲ್ದಾರ್ ಜೂಗಲ ಮಂಜು ನಾಯಕ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿ ಜಲಾಶಯದಿಂದ ನದಿಗೆ ಹರಿಬಿಡುವ ನೀರಿನ ಪ್ರಮಾಣದಲ್ಲಿ ಹೆಚ್ಚಾದ ಕಾರಣ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಯಾವುದೇ ಕಾರಣಕ್ಕೂ ನದಿಯ ಬಳಿ ತೆರಳಬಾರದೆಂದು ಸ್ಥಳೀಯರಿಗೆ ಸೂಚಿಸಲಾಗಿದೆ. ಇನ್ನು ಗಂಜಿ ಕೇಂದ್ರ ತೆರೆಯಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+